ಕೊಡಗಿನ ಬಿಲ್ಲವ ಬಾಂಧವರಿಗಾಗಿ ಕ್ರೀಡಾಕೂಟ

ಹೊಸದಿಗಂತ ವರದಿ, ಮಡಿಕೇರಿ:

ಬಿಲ್ಲವ ಸಮಾಜ ಸೇವಾ ಸಂಘದ ಕೊಡಗು ಜಿಲ್ಲಾ ಘಟಕದ ವತಿಯಿಂದ ಬಿಲ್ಲವ ಸಮುದಾಯ ಬಾಂಧವರಿಗಾಗಿ ಏ.30 ಮತ್ತು ಮೇ 1 ರಂದು 16ನೇ ವರ್ಷದ ಜಿಲ್ಲಾ ಮಟ್ಟದ ಕೋಟಿ ಚೆನ್ನಯ್ಯ ಕ್ರೀಡಾಕೂಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷೆ ಬಿ.ಎಸ್.ಲೀಲಾವತಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದರು.
ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಹಗ್ಗ ಜಗ್ಗಾಟ, ಭಾರದ ಗುಂಡು ಎಸೆತ, 50 ವರ್ಷ ಮೇಲ್ಪಟ್ಟವರಿಗೆ ವೇಗದ ನಡಿಗೆ, ಮಹಿಳೆಯರ ಪ್ರತ್ಯೇಕ ವಿಭಾಗದಲ್ಲಿ ಥ್ರೋಬಾಲ್, ವಿಷ ಚೆಂಡು, ಪುರುಷರ ವಿಭಾಗದಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ. 5 ವರ್ಷದ ಒಳಗಿನ ಮಕ್ಕಳಿಗೆ ಕಾಳು ಹೆಕ್ಕುವ ಸ್ಪರ್ಧೆ, 1 ರಿಂದ 2ನೇ ತರಗತಿ ಬಾಲಕ, ಬಾಲಕಿಯರಿಗೆ ಕಪ್ಪೆ ಜಿಗಿತ, 3 ರಿಂದ 5ನೇ ತರಗತಿ ಬಾಲಕ ಹಾಗೂ ಬಾಲಕಿಯರಿಗೆ 50 ಮೀ. ಓಟ, 5ನೇ ತರಗತಿಯಿಂದ 7ನೇ ತರಗತಿ ಬಾಲಕ ಹಾಗೂ ಬಾಲಕಿಯರಿಗೆ 100 ಮೀ. ಓಟ, ಪ್ರೌಢಶಾಲಾ ವಿಭಾಗ ಬಾಲಕ ಹಾಗೂ ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಬಾಲಕ, ಬಾಲಕಿಯರಿಗೆ 400 ಮೀ. ಓಟದ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.
ಹೈಸ್ಕೂಲ್, ಪದವಿ ಪೂರ್ವ ಹಾಗೂ ಪದವಿ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಒಳಾಂಗಣ ಚೆಸ್ ಮತ್ತು ಕೇರಂ ಏರ್ಪಡಿಸಲಾಗಿದ್ದು, ರೂ.200 ಪ್ರವೇಶ ಶುಲ್ಕ ಪಾವತಿಸಿ ಮಾ.19 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.
ಕ್ರಿಕೆಟ್ ಹಾಗೂ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ಭಾಗವಹಿಸುವ ಪುರುಷ ತಂಡಗಳು ರೂ.2,000 ವಾಲಿಬಾಲ್ ರೂ.1,500 ಮತ್ತು ಮಹಿಳೆಯರ ಥ್ರೋಬಾಲ್, ಹಗ್ಗಜಗ್ಗಾಟ ತಂಡಗಳಿಗೆ ರೂ.1,000 ಪಾವತಿಸಿ ಏ.25 ರೊಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!