ಹೊಸದಿಗಂತ ಡಿಜಿಟಲ್ ಡೆಸ್ಕ್:
ತುಮಕೂರಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾನೆ.
ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಮೋಹನ್ ಕುಮಾರ್ ಸಿ.ಎಸ್, ಕಂಚೀರಾಯ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ.
ಏಕಾಏಕಿ ಮೋಹನ್ ಅಸ್ವಸ್ಥನಾಗಿದ್ದು, ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಮೋಹನ್ ಮೃತಪಟ್ಟಿದ್ದಾನೆ.
ಪರೀಕ್ಷೆ ಬರೆಯಲು ಹೋದ ಮಗ ಏಕಾಏಕಿ ಮೃತಪಟ್ಟಿದ್ದನ್ನು ಕಂಡು ಪೋಷಕರು ಕಂಗಾಲಾಗಿದ್ದಾರೆ. ಸಾವಿಗೆ ಕಾರಣ ತಿಳಿದುಬಂದಿಲ್ಲ.