ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ವಿದ್ಯಾರ್ಥಿಯೋರ್ವನನ್ನು ಎನ್ ಐ ಎ ತಂಡ ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದು ಬಂದಿದೆ.
ಪೊಲೀಸ್ ಮೂಲಗಳ ಪ್ರಕಾರ , ಎನ್ ಐ ಎ ವಶದಲ್ಲಿರುವಾತ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಈತ ಮಂಗಳೂರಿನಲ್ಲಿ ಉಗ್ರವಾದದ ಪರ ಗೋಡೆ ಬರಹಕ್ಕೆ ಸಂಬಂಧಿಸಿದ ಆರೋಪಿ ಶಿವಮೊಗ್ಗದಿಂದ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಜತೆಗೆ ನಿರಂತರ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.
ಈತ ಉಡುಪಿ ಮೂಲದ ನಿವಾಸಿ ಎಂದೂ ಹೇಳಲಾಗುತ್ತಿದ್ದು, ಹೆಚ್ಚಿನ ವಿವಾಚರಣೆಗೆ ಎನ್ ಐ ಎ ತಂಡ ಈತನನ್ನು ಉಡುಪಿಗೆ ಕರೆದ್ಯೋಯುವ ಸಾಧ್ಯತೆಯಿದೆ.
ಘಟನೆ ಬಗ್ಗೆ ಎನ್ ಐ ಎ ತಂಡ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಹೆಚ್ಚಿನ ಮಾಹಿತಿ ನಿರಿಕ್ಷಿಸಲಾಗಿದೆ.