ಹೊಸದಿಗಂತ ವರದಿ, ಮೈಸೂರು:
ಹೋಟೆಲ್ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿಯೊಬ್ಬ ತಿಂಡಿ ಬರುವ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ ಹುಣಸೂರು ತಾಲೂಕಿನ ನಂಜಪುರ ಗ್ರಾಮದ ನಿವಾಸಿಯಾದ ನಿತೀಶ್ ಕುಮಾರ್ (25)ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ.
ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜಿನಲ್ಲಿ ನಿತೀಶ್ ಕುಮಾರ್ ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ. ಹುಣಸೂರು ಪಟ್ಟಣದಲ್ಲಿ ಸ್ನೇಹಿತನ ಜೊತೆ ತಿಂಡಿ ತಿನ್ನಲು ಹೋಟೆಲ್ಗೆ ಹೋಗಿದ್ದ. ಟೇಬಲ್ ಮೇಲೆ ಕುಳಿತುಕೊಂಡು ತಿಂಡಿಗೆ ಆರ್ಡರ್ ಮಾಡಿದ್ದಾರೆ.
ತಿಂಡಿ ಬರುವ ಮುನ್ನವೇ ಸ್ನೇಹಿತನ ಜೊತೆ ಮಾತನಾಡುತ್ತಿರುವಾಗಲೇ ಟೇಬಲ್ನಲ್ಲಿ ಹಠಾತ್ ಕುಸಿದು ಬಿದ್ದಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲೇ ನಿತೀಶ್ ಮೃತಪಟ್ಟಿದ್ದಾನೆ. ನಿತೀಶ್ ಹಠಾತ್ ಹೃದಯಾಘಾತ ಸಂಭವಿಸಿರುವುದರಿoದ ಸಾವನ್ನಪ್ಪುತ್ತಿರುವ ಕೊನೆಯ ಕ್ಷಣದ ದೃಶ್ಯ ಹೋಟೆಲ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹೃದಯಾಘಾತದಿಂದ ಮೃತಪಟ್ಟ ವಿದ್ಯಾರ್ಥಿಯ ಶವದ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ಘಟನೆ ಕುರಿತು ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.