ಸಾಯಬೇಕೆಂದು ಕಾವೇರಿ ನದಿಗೆ ಹಾರಿ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ ವಿದ್ಯಾರ್ಥಿನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಆತ್ಮಹತ್ಯೆ ಮಾಡಿಕೊಳ್ಳಲು ಕಾವೇರಿ ನದಿಗೆ ಹಾರಿ, ನದಿಯ ಮಧ್ಯೆಯಿದ್ದ ಮರಕ್ಕೆ ಸಿಲುಕಿ ರಾತ್ರಿಯಿಡೀ ಒದ್ದಾಡಿದ್ದ ಬೆಂಗಳೂರಿನ ಕಾನೂನು ವಿದ್ಯಾರ್ಥಿನಿಯನ್ನು ಶುಕ್ರವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ ಯವತಿಯನ್ನು ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿ ನಿವಾಸಿ ಪವಿತ್ರ (19) ಎಂದು ಗುರ್ತಿಸಲಾಗಿದೆ.

ನದಿಗೆ ಹಾರಿದ್ದ ಪವಿತ್ರ ಸುಮಾರು ಐದು ಕಿ.ಮೀ. ದೂರ ಪ್ರವಾಹದಲ್ಲಿ ಕೊಚ್ಚಿ ಹೋಗಿ ನದಿಯ ಮಧ್ಯೆಯಿದ್ದ ಮರವೊಂದಕ್ಕೆ ಸಿಕ್ಕಿಕೊಂಡಿದ್ದರು. ಇಡೀ ರಾತ್ರಿ‌ ಮರದ ಮೇಲೆ‌ ಕುಳಿತಿದ್ದರು. ಶುಕ್ರವಾರ ಮುಂಜಾನೆ ಕಾಪಾಡಿ… ಎಂದು ಅವರು ಕೂಗಿಕೊಂಡಿದ್ದು ಈ ವೇಳೆ ರೈತರಿಗೆ ನದಿಯ ಮಧ್ಯೆ ವ್ಯಕ್ತಿಯೊಬ್ಬರು ಸಿಕ್ಕಿಕೊಂಡಿರುವುದು ತಿಳಿದಿದೆ.

ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು, ಯುವತಿಯನ್ನು ರಕ್ಷಿಸಿ, ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನದಿಯಲ್ಲಿ ನೀರಿನ ಸೆಳೆತ ಮತ್ತಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿನಿ ಕೊಚ್ಚಿ ಹೋಗುತ್ತಿದ್ದರು. ಆಕೆ ಅದೃಷ್ಟಶಾಲಿ ಎಂದು ಪಿಎಸ್ಐ ವಿನೋದ್ ಕುಮಾರ್ ತಿಳಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!