ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರದೇಶದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಯೊಬ್ಬ ಅಂಕಪಟ್ಟಿ ನೀಡಲು ವಿಳಂಬ ಮಾಡಿದ ಪ್ರಿನ್ಸಿಪಾಲ್ಗೆ ಬೆಂಕಿ ಹಚ್ಚಿ ಕೊಂದಿದ್ದಾನೆ.
ಇಂದೋರ್ನ ಕಾಲೇಜಿನ ಪ್ರಾಂಶುಪಾಲೆ ವಿಮುಕ್ತಾ ಶರ್ಮಾ ಅವರ ಮೇಲೆ ವಿದ್ಯಾರ್ಥಿ ಅಶುತೋಷ್ ಶ್ರೀವಾತ್ಸವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.
ಬಿಫಾರ್ಮ್ ಅಂಕಪಟ್ಟಿ ಇನ್ನೂ ನೀಡಿಲ್ಲ ಎಂದು ಆರೋಪಿಸಿ ವಿದ್ಯಾರ್ಥಿ ಬೆಂಕಿ ಹಚ್ಚಿದ್ದು, ಶೇ.೯೦ರಷ್ಟು ಸುಟ್ಟ ಗಾಯಗಳಾಗಿದ್ದ ಪ್ರಿನ್ಸಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಅಶುತೋಶ್ ಶ್ರೀವಾತ್ಸವ ವಿರುದ್ಧ ಪ್ರಕರಣ ದಾಖಲಾಗಿದೆ.