ಉತ್ತರ ಪತ್ರಿಕೆಯಲ್ಲಿ ಜೈಶ್ರೀರಾಮ್‌ ಎಂದು ಬರೆದ ವಿದ್ಯಾರ್ಥಿಗೆ ಮಾರ್ಕ್ಸ್‌ ಕೊಟ್ಟ ಶಿಕ್ಷಕ ಸಸ್ಪೆಂಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಂಕ ನೀಡಿದ ಶಿಕ್ಷಕರನ್ನು ಅಮಾನತು ಮಾಡಲು ಆದೇಶಿಸಲಾಗಿದೆ.

ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು  ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!