ಮಾರುಕಟ್ಟೆಯಿಂದ ಹೂವು ತರಲು ಹೋಗಿದ್ದವರಿಗೆ ಭೀಕರ ಅಪಘಾತ, ಮೃತದೇಹ ಛಿದ್ರ ಛಿದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾರುಕಟ್ಟೆಗೆ ಹೂವು ತರಲು ಹೊರಟಿದ್ದವರಿಗೆ ಭೀಕರ ಅಪಘಾತವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿನ್ನಯ್ಯನಹಟ್ಟಿ ಬಳಿ ಅಪರಿಚಿತ ವಾಹನ ಬೈಕ್​​ಗೆ ಡಿಕ್ಕಿ ಹೊಡೆದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಚಿನ್ನಯ್ಯನಗಟ್ಟಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ.

ಶಿವಾನಂದ (50) ಮೃತ ದುರ್ದೈವಿ. ಮೃತ ಶಿವಾನಂದ ಹಿರಿಯೂರು ತಾಲೂಕಿನ ಜಡಗೊಂಡನಹಳ್ಳಿ ನಿವಾಸಿಯಾಗಿದ್ದಾರೆ. ಮಾರುಕಟ್ಟೆಗೆ ಹೂ ತರಲು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಅಪರಿಚಿತ ವಾಹನ ಡಿಕ್ಕಿಯಾದ ರಭಸಕ್ಕೆ ಮೃತದೇಹ ಛಿದ್ರಗೊಂಡಿದೆ.  ಸ್ಥಳಕ್ಕೆ ಪೊಲೀಸ್ ಇನ್​​ಸ್ಪೆಕ್ಟರ್ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!