ಭೀಕರ ರಸ್ತೆ ಅಪಘಾತ: ಇಬ್ಬರು ಸಾವು, ನಾಲ್ವರಿಗೆ ಗಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು-ಮೂಡಬಿದ್ರಿ ರಾಷ್ಟ್ರೀಯ ಹೆದ್ದಾರಿಯ ಗುರುಪುರ ಕೈಕಂಬ ಸಮೀಪದ ಎಕೆಯು ಶಾಲೆಯ ಬಳಿ ಗುರುವಾರ ಮುಂಜಾನೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಪುಂಡಲೀಕ (60) ಮತ್ತು ಅಶ್ವಿನಿ (29) ಮೃತಪಟ್ಟವರು.
5 ವರ್ಷದ ಶ್ರೇಯಾ ಸಹಿತ ಸಂತೋಷ, ಪುಷ್ಪಾ, ಮತ್ತು ಕಾರು ಚಾಲಕ ಸೊಹೈಲ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.
ಪುಂಡಲೀಕ ಅವರ ಚಿಕಿತ್ಸೆಗಾಗಿ ಕುಟುಂಬಸ್ಥರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಲು ಸೊರಬದಿಂದ ಬುಧವಾರ ರಾತ್ರಿ 12 ಗಂಟೆಗೆ ವ್ಯಾಗನರ್ ಕಾರಿನಲ್ಲಿ ಹೊರಟಿದ್ದರು. ಗುರುವಾರ ಮುಂಜಾನೆ 5 ಗಂಟೆ ವೇಳೆಗೆ ಕಾರು ಗುರುಪುರ ಕೈಕಂಬದ ಸಮೀಪದ ಎಕೆಯು ಶಾಲೆಯ ಬಳಿ ಬರುತ್ತಿದ್ದಂತೆ ಹೆದ್ದಾರಿಯ ಬಲ ಬದಿಯಲ್ಲಿರುವ ಮರಕ್ಕೆ ಗುದ್ದಿ ವಿರುದ್ಧ ದಿಕ್ಕಿಗೆ ತಿರುಗಿ ನಿಂತಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!