ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಸಮೀಪ ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ನೀರು ಪಾಲಾದ ಘಟನೆ ನಡೆದಿದೆ.
ಸೋಮಶೇಖರ ದೇವರಮನೆ(15), ಪರನಗೌಡ ಬಿಳಗಿ(17) ಹಾಗೂ ಮಲ್ಲಪ್ಪ ಬಗಲಿ (16) ಮೃತಪಟ್ಟವರು. ಮೂವರ ಪೈಕಿ ಓರ್ವನ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದೆ.
ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.