ಹೊಸದಿಗಂತ ಡಿಜಿಟಲ್ ಡೆಸ್ಕ್:
ಉಡುಪಿಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರ ಪರಿಣಾಮ ರೈಲ್ವೇ ಟ್ರ್ಯಾಕ್ ನ ವಿದ್ಯುತ್ ಕಂಬದ ಮೇಲೆ ಮರವೊಂದು ಕುಸಿದು ಬಿದ್ದಿರುವ ಘಟನೆ ಉಡುಪಿ – ಬಾರ್ಕೂರು ಮಾರ್ಗ ಮಧ್ಯೆ ನಡೆದಿದೆ.
ಇದರ ಪರಿಣಾಮ ಸುಮಾರು ಎರಡು ಗಂಟೆಗೂ ಅಧಿಕ ಸಮಯ ರೈಲು ಸ್ಥಗಿತಗೊಂಡಿದೆ.
ಇದರಿಂದಾಗಿ ದೆಹಲಿ-ಕೇರಳ ನಡುವೆ ಸಂಚರಿಸುವ ನಿಜಾಮುದ್ದೀನ್- ತಿರುವನಂತಪುರ ಎಕ್ಸ್ ಪ್ರೆಸ್ ರೈಲು ಸುಮಾರು ಎರಡು ಗಂಟೆಗೂ ಅಧಿಕ ಕಾಲ ಸ್ಥಗಿತಗೊಂಡಿತು.
ರೈಲ್ವೇ ಇಲಾಖೆಯ ಅಧಿಕಾರಿಗಳು ಮರ ತೆರವು ಕಾರ್ಯ ನಡೆಸಿದ ಬಳಿಕ ಮತ್ತೆ ರೈಲು ಸಂಚಾರ ಆರಂಭಗೊಂಡಿತು.