ನಿಜವಾದ ಜನ ಸೇವಕ ಎಂದಿಗೂ ಅಹಂಕಾರವನ್ನು ತೋರಿಸುವುದಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಸೌಜನ್ಯವನ್ನು ಕಾಪಾಡಿಕೊಂಡಿಲ್ಲ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಸೋಮವಾರ ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಜವಾದ ಜನ ಸೇವಕ ಎಂದಿಗೂ ಅಹಂಕಾರವನ್ನು ತೋರಿಸುವುದಿಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಯಾವಾಗಲೂ ಸೌಜನ್ಯವನ್ನು ಕಾಪಾಡಿಕೊಳ್ಳುತ್ತಾನೆ. ಎಂದಿದ್ದಾರೆ.

“ನಿಜವಾದ ಸೇವಕನು ಕೆಲಸ ಮಾಡುವಾಗ ಸಜ್ಜನಿಕೆಯನ್ನು ಕಾಯ್ದುಕೊಳ್ಳುತ್ತಾನೆ… ಸಜ್ಜನಿಕೆಯನ್ನು ನಿರ್ವಹಿಸುವವನು ತನ್ನ ಕೆಲಸವನ್ನು ಮಾಡುತ್ತಾನೆ, ಜನ ಸೇವಕ ಎಂದಿಗೂ ಅಹಂಕಾರವನ್ನು ತೋರಿಸುವುದಿಲ್ಲ. ಅಂತಹ ವ್ಯಕ್ತಿಗೆ ಮಾತ್ರ ಸೇವಕ ಎಂದು ಕರೆಯುವ ಹಕ್ಕಿದೆ” ಎಂದು ಹೇಳಿದ್ದಾರೆ.

ಮೋಹನ್ ಭಾಗವತ್ ಅವರು ತಮ್ಮ ಭಾಷಣದಲ್ಲಿ ಹಿಂಸಾಚಾರ ಪೀಡಿತ ಮಣಿಪುರವನ್ನು ಉಲ್ಲೇಖಿಸಿ, “ಮಣಿಪುರ ಒಂದು ವರ್ಷದಿಂದ ಶಾಂತಿಯನ್ನು ಹುಡುಕುತ್ತಿದೆ. ಅದಕ್ಕೆ ಆದ್ಯತೆ ನೀಡುವುದು ಮತ್ತು ಅದನ್ನು ಗಮನಿಸುವುದು ಕರ್ತವ್ಯವಾಗಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!