ದೇವೇಗೌಡರ ನಿವಾಸಕ್ಕೆ ಸಿದ್ದು ಭೇಟಿ: ಕುತೂಹಲ ಮೂಡಿಸಿದ ಗುರು ಶಿಷ್ಯರ ಸಮಾಗಮ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಗುರು ಶಿಷ್ಯರ ಅಪರೂಪದ ಸಮಾಗಮಕ್ಕೆ ಮಾಜಿ ಪ್ರಧಾನಿ ದೇವೇಗೌಡರ ನಿವಾಸ ಸಾಕ್ಷಿಯಾಯಿತು! ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೇವೇಗೌಡರ ನಿವಾಸಕ್ಕೆ ಇಂದು ಖುದ್ದಾಗಿ ಭೇಟಿ ಮಾಡಿ ತಮ್ಮ ರಾಜಕೀಯ ಗುರು ದೊಡ್ಡಗೌಡರ ಆರೋಗ್ಯ ವಿಚಾರಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ‌ ಹಲವು ಬೆಳವಣಿಗೆಗಳು ನಡೆಯುತ್ತಿರುವಾಗಲೇ ಈ ಗುರು ಶಿಷ್ಯರ ಭೇಟಿ ಹಲವು ಕುತೂಲಹಲ ಮೂಡಿಸಿದೆ.

‘ಹಿರಿಯರಾದ ಮಾಜಿ ಪ್ರಧಾನಿ ದೇವೇ ಗೌಡರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. ಬಹಳ ದಿನಗಳ ನಂತರ ದೇವೇಗೌಡರನ್ನು ಭೇಟಿಯಾದದ್ದು ಸಂತೋಷವಾಯಿತು’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಈ‌ ನಡುವೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ದೇವೇಗೌಡರಿಗೆ ಕಾಲು ನೋವಿದೆ ಎಂಬ ವಿಚಾರ ತಿಳಿದು ಅರೋಗ್ಯ ವಿಚಾರಣೆಗೆ ಭೇಟಿ ನೀಡಿದ್ದೇನೆ, ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!