ರಾಜ್ಯದಲ್ಲಿ ಒಂದು ವಾರಗಳ ಕಾಲ ಮಳೆ ನರ್ತನ, ಅಲ್ಲಲ್ಲಿ ಮೋಡದ ವಾತಾವರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಅಸಾನಿ ಆರ್ಭಟ ಇಳಿಮುಖವಾದ ಬಳಿಕವೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ವಾತಾವರಣ ಯಥಾಸ್ಥಿತಿ ಮುಂದುವರಿದಿದ್ದು, ಇದರ ಪ್ರಭಾವ ರಾಜ್ಯದ ಕರಾವಳಿ ಜಿಲ್ಲೆಗಳ ಮೇಲೆ ಕಾಣಿಸಿಕೊಳ್ಳುತ್ತಿದೆ. ದಕ್ಷಿಣ ಕನ್ನಡ, ಕಾಸರಗೋಡು ಹಾಗೂ ಉಡುಪಿಯಲ್ಲಿ ಮುಂದಿನ ಒಂದು ವಾರದ ತನಕ ಮೋಡ, ಮಳೆಯ ಜುಗಲ್ ಬಂದಿ ಮುಂದುವರಿಯುವ ಎಲ್ಲಾ ಲಕ್ಷಣ ಗೋಚರಿಸುತ್ತಿದೆ.

ಕೇರಳದಲ್ಲಿ ವರುಣಾರ್ಭಟ
ಕೇರಳ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮುಂದಿನ ಒಂದೆರಡು ದಿನಗಳ ಕಾಲ ಭಾರೀ ಮಳೆ‌ಸುರಿಯುವ ಸಾಧ್ಯತೆ ದಟ್ಟವಾಗಿದೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸಲು ಆಡಳಿತಗಳು ಈಗಾಗಲೇ ನಾಗರಿಕರು, ಮೀನುಗಾರರಿಗೆ ಸೂಚಿಸಿವೆ.

ರಾಜ್ಯದಲ್ಲಿ ಹೇಗಿದೆ?
ಮೇ 15ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ನೆರೆಯ ಕಾಸರಗೋಡಿನ ಹೆಚ್ಚಿನ ಭಾಗಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸುತ್ತಮುತ್ತ ಭರ್ಜರಿ ಮಳೆಯ ಮುನ್ಸೂಚನೆ ಇದೆ. ಈ ಜಿಲ್ಲೆಗಳ ಉಳಿದೆಡೆ, ಉಡುಪಿಯ ಹೆಚ್ಚಿನ ಭಾಗಗಳಲ್ಲಿ, ಉತ್ತರ ಕನ್ನಡದ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಕಂಡುಬಂದಿದೆ.

ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಕೂಡಾ ಅಲ್ಲಲ್ಲಿ ಕೂಡಾ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದರೆ, ಕರ್ನಾಟಕದ ಉಳಿದ ಭಾಗಗಳಲ್ಲಿ ಮೋಡ ಅಥವಾ ತುಂತುರು ಮಳೆಯ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!