ಮಡಿಕೇರಿಯ ಕಾಫಿ ತೋಟದಲ್ಲಿ ಕಾಡಾನೆ ಕಳೇಬರ ಪತ್ತೆ

ಹೊಸದಿಗಂತ ವರದಿ ಮಡಿಕೇರಿ:

ಕಾಡಾನೆಯ ಮೃತದೇಹವೊಂದು ಕಾಫಿ ತೋಟದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿ ಬೆಟ್ಟದಕಾಡು ಸಮೀಪದ ಕಾಟಿಬಾಣೆ ಕಾಫಿ ತೋಟದಲ್ಲಿ ಅಂದಾಜು 30 ವರ್ಷ ಪ್ರಾಯದ ಹೆಣ್ಣಾನೆಯ ಕಳೇಬರ ಕಂಡು ಬಂದಿದೆ.
ಕಾರ್ಮಿಕನೊಬ್ಬ ದನ‌ ಮೇಯಿಸಲು ತೆರಳಿದ್ದ ಸಂದರ್ಭ ಕೊಳೆತ ಸ್ಥಿತಿಯಲ್ಲಿ ಕಾಡಾನೆಯ ಕಳೇಬರ ಕಂಡುಬಂದಿದ್ದು,ತೋಟದ ಮಾಲಕರಿಗೆ ಮಾಹಿತಿ ನೀಡಿದ್ದಾರೆ.
ತೋಟ ಮಾಲಕರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ಕುಶಾಲನಗರ ವಲಯ ಅರಣ್ಯಾಧಿಕಾರಿ ಶಿವರಾಮ್,ಉಪವಲಯ ಅರಣ್ಯಾಧಿಕಾರಿ ಸುಬ್ರಾಯ, ವನ್ಯಜೀವಿ ವೈದ್ಯಾಧಿಕಾರಿ ಡಾ.ಚಿಟ್ಟಿಯಪ್ಪ, ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲಿಸಿದರು.
ಕಾಡಾನೆಯು ಅನಾರೋಗ್ಯಕ್ಕೆ ಒಳಗಾಗಿ ಮೃತ ಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!