ಜವರಾಯನಂತೆ ನುಗ್ಗಿದ ಕಾಡಾನೆ: ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಸವಾರ!

ಹೊಸದಿಗಂತ ಮಡಿಕೇರಿ: ಕೊಡಗು ಜಿಲ್ಲೆಯ ಸಿದ್ದಾಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಸೋಮವಾರ ಬೆಳಗಿನ ಜಾವ ರೆಸಾರ್ಟ್ ಉದ್ಯೋಗಿಯೊಬ್ಬರು ಆನೆಯ ದಾಳಿಯಿಂದ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ಕರಡಿಗೋಡು ಆರೆಂಜ್ ಕೌಂಟಿ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿರುವ ಪುಟ್ಟುಸ್ವಾಮಿ ಎಂಬುವವರು ಇಂದು ಮುಂಜಾನೆ ಎಂದಿನಂತೆ ತಮ್ಮ ಬೈಕಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಕರಡಿಗೋಡು ರಸ್ತೆಯಲ್ಲಿ ಸಾಗುತ್ತಿದ್ದಾಗ ಹಠಾತ್ ಎದುರಾದ ಕಾಡಾನೆಯೊಂದು ಅವರ ಮೇಲೆ ದಾಳಿಗೆ ಮುಂದಾಗಿದೆ. ಭಯಭೀತರಾದ ಪುಟ್ಟುಸ್ವಾಮಿ ತಕ್ಷಣವೇ ಚತುರತೆ ಮೆರೆದು ಬೈಕನ್ನು ಅಲ್ಲೇ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ. ಕಳೆದ … Continue reading ಜವರಾಯನಂತೆ ನುಗ್ಗಿದ ಕಾಡಾನೆ: ಬೈಕ್ ಬಿಟ್ಟು ಓಡಿ ಪ್ರಾಣ ಉಳಿಸಿಕೊಂಡ ಸವಾರ!