ಅಪ್ರಾಪ್ತ ಬಾಲಕನನ್ನು ಬೆತ್ತಲಾಗಿಸಿ ಕಂಬಕ್ಕೆ ಕಟ್ಟಿ ಹಲ್ಲೆ

ಹೊಸದಿಗಂತ ವರದಿ,ವಿಜಯಪುರ:

ಅಪ್ರಾಪ್ತ ಬಾಲಕನನ್ನು ಬೆತ್ತಲಾಗಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಘಟನೆ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ನಡೆದಿದೆ.

ಹಲ್ಲೆಗೊಳಗಾದ 12 ವರ್ಷದ ಬಾಲಕ, ಎಲ್ಲರಿಗೂ ಅಶ್ಲೀಲವಾಗಿ ಬೈಯುತಿದ್ದ ಎನ್ನುವ ಕಾರಣಕ್ಕೆ ಗ್ರಾಮದ ಹಣಮಂತರಾಯ ಮಡಿಕೇಶ್ವರ ಎಂಬವನು, ಕಂಬಕ್ಕೆ ಕಟ್ಟಿ, ಬಣ್ಣ ಎರಚಿ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಅಲ್ಲದೆ, ಈ ಹಲ್ಲೆಯ ದೃಶ್ಯವನ್ನು ಸ್ಥಳಿಯರು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ವಿಡಿಯೋ ಕ್ಲಿಪಿಂಗ್ ವೈರಲ್ ಆಗಿದೆ.

ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!