ಕಬಡ್ಡಿ ಆಡುತ್ತಲೇ ಹೃದಯಾಘಾತಕ್ಕಿಡಾಗಿ ಅಖಾಡದಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಕಬಡ್ಡಿ ಪಂದ್ಯಾವಳಿಯಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ.
ತಮಿಳುನಾಡಿನ ಕಡಲೂರು ಜಿಲ್ಲೆಯ ಮಂಡಕ್ಕಿ ಗ್ರಾಮದಲ್ಲಿ ನಡೆದಿದ್ದ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ ವೇಳೆ ಈ ದುರಂತ ಸಂಭವಿಸಿದೆ. 22 ವರ್ಷದ ಬಿಎಸ್ಸಿ ವಿದ್ಯಾರ್ಥಿ ವಿಮಲ್ ರಾಜ್ ಮೃತ ಯುವಕ.
ಸೇಲಂ ಜಿಲ್ಲೆಯ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ರಜೆ ಕಳೆಯಲು ಮನೆಗೆ ಬಂದಿದ್ದ. ಮುರಟ್ಟು ಕಾಲೈ ಟಿಂ ಕಬಡ್ಡಿ ತಂಡವನ್ನು ಪ್ರತಿನಿಧಿಸುತ್ತಿದ್ದನು .
ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ ಆಯೋಜನೆ ಹಿನ್ನೆಲೆಯಲ್ಲಿ ಪಂದ್ಯದಲ್ಲಿ ಭಾಗವಹಿಸಿದ್ದ ವಿಮಲ್ ರಾಜ್, ಎದುರಾಳಿ ತಂಡದ ಆಟಗಾರನ ಮೇಲೆ ರೈಡಿಂಗ್ ಹೋದಾಗ ಹೃದಯಾಘಾತಕ್ಕಿಡಾಗಿ ಕಬಡ್ಡಿ ಅಖಾಡದಲ್ಲಿಯೇ ಕುಸಿದು ಬಿದ್ದಿದ್ದಾನೆ.
ಮೇಲೇಳಲು ಸಾಧ್ಯವಾಗದೇ ಕಬಡ್ಡಿ ಕೋರ್ಟ್ ನಲ್ಲೇ ಮಲಗಿದ ವಿಮಲ್ ನನ್ನು ಇತರ ಆಟಗಾರರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.ಪಣರುಟಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಅಷ್ಟರಲ್ಲಿಯೇ ವಿಮಲ್ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಇತ್ತೀಚೆಗೆ ಕಿಕ್ ಬಾಕ್ಸಿಂಗ್ ಸ್ಪರ್ಧೆ ವೇಳೆಯೇ ಕ್ರೀಡಾಪಟು ಸಾವನ್ನಪ್ಪಿದ್ದ ಘಟನೆ ನಡೆದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!