ನಿಂತಿದ್ದ ವಾಹನಕ್ಕೆ ಸ್ಕೂಟರ್ ಡಿಕ್ಕಿಯಾಗಿ ಯುವಕ ಸಾವು

ಹೊಸದಿಗಂತ ವರದಿ,ಮಡಿಕೇರಿ:

ನಿಂತಿದ್ದ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಸಿದ್ದಾಪುರ ಪಟ್ಟಣದಲ್ಲಿ ನಡೆದಿದೆ.
ಸಿದ್ದಾಪುರ ಪಂಚಾಯ್ತಿ ವ್ಯಾಪ್ತಿಯ ಗೂಡುಗದ್ದೆ ನಿವಾಸಿ ಬಶೀರ್ ಎಂಬವರ ಪುತ್ರ ಸಲ್ಮಾನ್ (19) ಎಂಬಾತನೇ ಸಾವನ್ನಪ್ಪಿರುವ ದುರ್ದೈವಿ.
ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಲ್ಮಾನ್, ಮಂಗಳವಾರದಂದು ಸಿದ್ದಾಪುರ ಸಮೀಪದ ಅಂಬೇಡ್ಕರ್ ನಗರದಿಂದ ಸಿದ್ದಾಪುರಕ್ಕೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ. ಈ ಸಂದರ್ಭ ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಳಿ ನಿಲ್ಲಿಸಿದ್ದ ಕಾರಿಗೆ ಡಿಕ್ಕಿ ಹೊಡೆದಿರುವುದಾಗಿ ಹೇಳಲಾಗಿದೆ. ಇದರಿಂದ ಗಂಭೀರ ಸ್ವರೂಪದಲ್ಲಿ ಗಾಯಗೊಂಡ ಸಲ್ಮಾನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.
ಸಿದ್ದಾಪುರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!