ಹೊಸದಿಗಂತ ವರದಿ,ವಿಜಯಪುರ:
ಮಹಿಳೆಯನ್ನು ಬರ್ಬರವಾಗಿ ನಡು ರಸ್ತೆಯಲ್ಲಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಜಿಲ್ಲೆಯ ಸಿಂದಗಿ ಪಟ್ಟಣದ ಹುಡ್ಕೊ ಕಾಲೋನಿಯಲ್ಲಿ ಭಾನುವಾರ ನಡೆದಿದೆ.
ಇಲ್ಲಿನ ಶಾಂತಾಬಾಯಿ ತಳವಾರ (54) ಮೃತಪಟ್ಟ ಮಹಿಳೆ.
ಶಾಂತಾಬಾಯಿ ತಳವಾರ ಅವಳನ್ನು ದುಷ್ಕರ್ಮಿಗಳು ಹರಿತವಾದ ಆಯುಧದಿಂದ ತಲೆಗೆ ಹೊಡೆದ ಹತ್ಯೆಗೈದು ಪರಾರಿಯಾಗಿದ್ದು, ಸ್ಥಳದಲ್ಲಿ ಅನುಮಾಸ್ಪದ ರೀತಿಯಲ್ಲಿ ಬೈಕ್ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.