ದಕ್ಷಿಣ ಕನ್ನಡದಲ್ಲಿ ಶಾಕಿಂಗ್ ಘಟನೆ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಜನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕನೊಬ್ಬ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ನಾನು ಅದ್ರಾಮ ಎನ್ನುವವರ ಮನೆಯಲ್ಲಿ ಕಾರ್ ಚಾಲಕನಾಗಿದ್ದೆ. ಹುಡುಗಿಯೊಬ್ಬಳ ಜೊತೆ ಸಂಬಂಧ ಇದೆ ಎಂದು ಆರೋಪಿಸಿ ನನ್ನ ಮೇಲೆ ನಾಲ್ವರು ಹಲ್ಲೆ ಮಾಡಿದ್ದಾರೆ. ಈ ವಿಷಯವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ನಾಸಿರ್ ಕಾರ್‌ನಲ್ಲಿ ಕುಳಿತು ವಿಡಿಯೋ ಮಾಡಿದ್ದು, ಸಾಮಾಜಿಕ‌ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನನಗೆ ಯಾವುದೇ ಹುಡುಗಿ ಜೊತೆ ಸಂಬಂಧ ಇಲ್ಲ ಆದರೂ ನನ್ನನ್ನು ಥಳಿಸಿ ಅವಮಾನ ಮಾಡಿದ್ದಾರೆ. ಅವರು ನನಗೆ ಸಂಬಂಧ ಇದೆ ಎಂದು ಹೇಳಿದ ಹುಡುಗಿಯ ಗಂಡ ನನ್ನ ಜೊತೆಯಲ್ಲೇ ಇದ್ದಾರೆ ಎಂದು ನಾಸಿರ್ ವ್ಯಕ್ತಿಯೋರ್ವರನ್ನು ತೋರಿಸುವ ದೃಶ್ಯವೂ ವಿಡಿಯೋದಲ್ಲಿದೆ.

ನನ್ನ ಸಾವಿಗೆ ಅದ್ರಾಮ ಹಾಗೂ ಅವರ ಕುಟುಂಬ ಕಾರಣ, ಪುತ್ತೂರಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಡು ಆತ ವಿಡಿಯೋ ಮುಗಿಸಿದ್ದಾರೆ. ತದನಂತರ ನಾಸಿರ್ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಸಿರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!