Friday, September 19, 2025

SHOCKING | ಬಸ್ ಇಳಿಯುತ್ತಿದ್ದಂತೆ ಅಟ್ಯಾಕ್ ಮಾಡಿ ಯುವಕನ ಕೊಚ್ಚಿ ಕೊಲೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಸ್ ಇಳಿಯುತ್ತಿದ್ದಂತೆ ಯುವಕನ ಮೇಲೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಕೊಚ್ಚಿ ಕೊಲೆಗೈದ ಪ್ರಕರಣ ಹುಕ್ಕೇರಿ ಶಹಾಬಂದರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಾಂತೇಶ್ ಬುಕನಟ್ಟಿ (24) ಕೊಲೆಯಾದ ಯುವಕ ಎಂದು ತಿಳಿದು ಬಂದಿದೆ. ಯುವಕ ಕೆಲಸ ಮುಗಿಸಿ ಊರಿಗೆ ವಾಪಸ್ ಆಗಿದ್ದ. ಈ ವೇಳೆ ಬಸ್ ಇಳಿಯುತ್ತಿದ್ದಂತೆ ಹಿಂದಿನಿಂದ ಬಂದು ಮಚ್ಚಿನಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ