ಹೊಸದಿಗಂತ ವರದಿ ವಿಜಯಪುರ:
ಮಕ್ಕಳ ಕಳ್ಳನೆಂದು ಯುವಕನನ್ನು ಗಿಡಕ್ಕೆ ಕಟ್ಟಿ ಹಾಕಿ ಗ್ರಾಮಸ್ಥರು ಥಳಿಸಿರುವ ಘಟನೆ ಜಿಲ್ಲೆ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನಡೆದಿದೆ.
ಅಪರಿಚಿತ ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿದ್ದು, ಎಲ್ಲಿಂದ ಬಂದಿರುವೆ ? ಎಷ್ಟು ಜನ ಬಂದಿದ್ದೀರಿ? ಮಕ್ಕಳ ಕದಿಯಲು ಬಂದಿದ್ದೀರಾ? ಎಂದು ಯುವಕನಿಗೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.