ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
ಹೊಸದಿಗಂತ ವರದಿ ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರು ಪಾಲಾದ ಘಟನೆ ಸೋಮವಾರ ತಾಲೂಕಿನ ಮಾಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆಕಾಶ್(17) ಮೃತ ಯುವಕ. ಇದನ್ನೂ ಓದಿ: ಸ್ನೇಹಿತರೊಂದಿಗೆ ಗ್ರಾಮದ ಕೆರೆಗೆ ಈಜಲು ತೆರಳಿದ್ದ ವೇಳೆ ಆಕಸ್ಮಿಕವಾಗಿ ಆಕಾಶ್ ನೀರಿನಲ್ಲಿ ಮುಳುಗಿದ್ದಾನೆ. ಸ್ನೇಹಿತನನ್ನು ರಕ್ಷಿಸಲು ಜೊತೆಗಿದ್ದವರು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಯುವಕನ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. … Continue reading ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಯುವಕ ನೀರುಪಾಲು
Copy and paste this URL into your WordPress site to embed
Copy and paste this code into your site to embed