VIRAL VIDEO | ಅರಿಶಿಣ ಗುಂಡಿ ಜಲಪಾತ ವೀಕ್ಷಣೆಗೆ ತೆರಳಿದ್ದ ಯುವಕ ನೀರು ಪಾಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿಯ ಅರಿಶಿಣ ಗುಂಡಿ ಜಲಪಾತವನ್ನು ವೀಕ್ಷಿಸುತ್ತಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದು ನೀರುಪಾಲಾಗಿದ್ದಾರೆ.
ಈ ವಿಡಿಯೋ ಎಲ್ಲೆಡೆ ಆಗಿದ್ದು, ಜಲಪಾತದ ಬಳಿ ಎಷ್ಟು ಕಾಳಜಿ ವಹಿಸಿದರೂ ಸಾಲದು ಎಂದು ಜನರು ಅಭಿಪ್ರಾಯಪಟ್ಟಿದ್ದಾರೆ.

ಕೊಲ್ಲೂರಿನ ಬಳಿ ಇರುವ ಜಲಪಾತವನ್ನು ನೋಡಲು ಭದ್ರಾವತಿ ಮೂಲದ ಯುವಕ ಶರತ್ ಕುಮಾರ್ ಆಗಮಿಸಿದ್ದು, ಕಾಲುಜಾರಿ ಬಿದ್ದಿದ್ದಾರೆ. ಯುವಕನ ಪತ್ತೆಗೆ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕೊಲ್ಲೂರು ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here