Monday, January 12, 2026

ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್‌ ಸೀಜ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್‌ ಮಾಡಿದ್ದಾರೆ.

ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ ಸೂಚಿಸಿದ್ದಾರೆ. ಆಗ ಯುವಕ ಸಿಬ್ಬಂದಿ ಬಳಿ ಗಲಾಟೆ ಮಾಡಿದ್ದಾನೆ. ಅಲ್ಲದೇ ದಂಡ ಕಟ್ಟಲ್ಲ, ಏನ್‌ ಮಾಡ್ತೀರೋ ಮಾಡಿ ಎಂದು ಅವಾಜ್‌ ಹಾಕಿದ್ದಾನೆ. ದಂಡ ಕಟ್ಟದ ಕಾರಣ ಯುವಕನ ಬೈಕ್‌ನ್ನ ನಗರಸಭೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಬೈಕ್ ವಶಕ್ಕೆ ಪಡೆಯುವ ವೇಳೆ ಬೈಕ್ ಕೀ ತಗುಲಿ ಮಹಿಳಾ ಅಧಿಕಾರಿ ಶಿಲ್ಪಾ ಸುರೇಶ್ ಅವರಿಗೆ ಗಾಯವಾಗಿದೆ. 

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!