ಹೊಸದಿಗಂತ ವರದಿ ವಿಜಯಪುರ:
ಕೌಟುಂಬಿಕ ಸಮಸ್ಯೆಗೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಜಲನಗರ ಬಡಾವಣೆಯಲ್ಲಿ ನಡೆದಿದೆ.
ಇಲ್ಲಿನ ಗಂಗಾ ನರಸರೆಡ್ಡಿ (35) ಮೃತಪಟ್ಟ ಯುವತಿ. ಗಂಗಾ ನರಸರೆಡ್ಡಿ ಮನೆಯಲ್ಲಿನ ಕೌಟುಂಬಿಕ ಸಮಸ್ಯೆಗೆ ಬೇಸತ್ತು, ಮನನೊಂದು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೇಳಲಾಗಿದೆ. ಇಲ್ಲಿನ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ