ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಯ್ಫ್ರೆಂಡ್ ಆತ್ಮಹತ್ಯೆ ಸುದ್ದಿ ಕೇಳಿ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾಳೆ.
ಗುರುಗ್ರಾಮದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಂಜು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಸುಟ್ಟ ಸ್ಥಿತಿಯಲ್ಲಿ ಮಂಜು ರೂಮ್ನಲ್ಲಿದ್ದು ತಕ್ಷಣವೇ ಅವರನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಮಂಜು ಮೃತಪಟ್ಟಿದ್ದಾರೆ.
ಕಿರಾಣಿ ಅಂಗಡಿ ನಿರ್ವಾಹಕ ಬಾಬುಲಾಲ್ ಅಕ್ರಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.