ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಧಾರ್ ಮತ್ತು ಮತದಾರರ ಗುರುತಿನ ಚೀಟಿ ಲಿಂಕ್ ಮಾಡುವ ವಿವಾದಾತ್ಮಕ ಕಾನೂನನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ಅದನ್ನು ರದ್ದು ಗೊಳಿಸಬೇಕು ಎಂದು ಕಾಂಗ್ರೆಸ್ನ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ. ಅರ್ಜಿಯಲ್ಲಿ ಸುರ್ಜೆವಾಲಾ ಕಾನೂನನ್ನು ಅಸಂವಿಧಾನಿಕ ಮತ್ತು ಗೌಪ್ಯತೆ ಮತ್ತು ಸಮಾನತೆಯ ಹಕ್ಕು ಗಳ ಉಲ್ಲಂಘನೆ ಎಂದು ಕರೆದಿದ್ದಾರೆ.
ಈ ಅರ್ಜಿ ಕುರಿತು ಸುಪ್ರೀಂಕೋರ್ಟ್ ಸೋಮವಾರ(ಜುಲೈ 25)ಇಂದು ವಿಚಾರಣೆ ನಡೆಸಲಿದೆ. ಚುನಾವಣಾ ಸುಧಾರಣಾ ಪ್ರಕ್ರಿಯೆ ಭಾಗವಾಗಿ ಚುನಾವಣಾ ಆಯೋಗವು ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ಮಾಡುವ ಯೋಜನೆಯನ್ನು ಪ್ರಾರಂಭಿಸಿದೆ. ಮತದಾರರ ಪಟ್ಟಿಯಲ್ಲಿ ಬಹು ನಮೂದುಗಳನ್ನು ನಿಲ್ಲಿಸುವುದು ಮತ್ತು ಅವುಗಳನ್ನು ದೋಷ ಮುಕ್ತಗೊಳಿಸುವುದು ಇದರ ಉದ್ದೇಶವಾಗಿತ್ತು .