ಹೊಸ ದಿಗಂತ ವರದಿ, ವಿಜಯಪುರ:
ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿ ಪರೋಲ್ ಮೇಲೆ ಹೊರ ಬಂದು ಪರಾರಿಯಾಗಿದ್ದು, ಆತನ ಮಾಹಿತಿಗೆ ಪೊಲೀಸ್ ಇಲಾಖೆ 1 ಲಕ್ಷ ರೂ. ಬಹುಮಾನ ಘೋಷಣೆ ಮಾಡಿದೆ.
ಜೀವಾವಧಿ ಶಿಕ್ಷೆಗೊಳಗಾಗಿದ್ದ ರಮೇಶ ಯಮನಪ್ಪ ಪರಪ್ಪಗೋಳ ಪರೋಲ್ ಮೇಲೆ ಹೊರ ಬಂದಿದ್ದು, ಕೇಂದ್ರ ಕಾರಾಗೃಹಕ್ಕೆ ತೆರಳಿ ಶರಣಾಗದೆ ತಲೆಮರೆಸಿಕೊಂಡಿದ್ದು, ಆತನ ಸುಳಿವು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಪ್ರಕಟಣೆಯಲ್ಲಿ ಕೋರಿದ್ದಾರೆ.
ಮಾಹಿತಿ ನೀಡಲು (ಜಿಲ್ಲಾ ಎಸ್ಪಿ ಮೊ. 9480804201 ಹಾಗೂ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 0852- 250948) ಇಲ್ಲಿಗೆ ಸಂಪರ್ಕಿಸಲು ತಿಳಿಸಿದ್ದಾರೆ.