ರಾಜ್ಯ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್: ಹೈಕಮಾಂಡ್ ಕೊಟ್ಟಿತು ಗ್ರೀನ್ ಸಿಗ್ನಲ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯ ಸಂಪುಟ ವಿಸ್ತರಣೆಗೆ ಮಹೂರ್ತ ಫಿಕ್ಸ್ ಆಗಿದೆ. ಖಾಲಿ ಇರುವ 6 ಸ್ಥಾನ ಭರ್ತಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ನವಂಬರ್ ಮೊದಲ ವಾರದಲ್ಲೇ ಸಂಪುಟ ವಿಸ್ತರಣೆ ನಡೆಯಲಿದೆ ಎನ್ನಲಾಗಿದೆ.
ಒಂದೆಡೆ ಆರೋಪ ಮುಕ್ತರಾದ ಬಳಿಕ ಸಚಿವ ಸ್ಥಾನಕ್ಕಾಗಿ ಕೆ.ಎಸ್ ಈಶ್ವರಪ್ಪ ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಹಳೇ ಮೈಸೂರು ಭಾಗದ ಒಕ್ಕಲಿಗ ಕೋಟದಲ್ಲಿ ಸಿ.ಪಿ ಯೋಗೇಶ್ವರ್ಗೆ ಸ್ಥಾನ ನೀಡಲು ನಿರ್ಧಾರ ಮಾಡಲಾಗಿದೆ. ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುತ್ತಾ ಎಂಬುದನ್ನು ಕಾದು ನೋಡಬೇಕು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ನಾಯಕರುಗಳ ಭಾರೀ ಕಸರತ್ತಿನ ನಂತರ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎನ್ನಲಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸೇರಲು ಹಲವಾರು ಮಂತ್ರಿಗಳು ರೇಸ್ ನಲ್ಲಿದ್ದಾರೆ. ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬ ಕುತೂಹಲ ಮೂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!