ವಾಹನ ತಪಾಸಣೆ ನಡೆಸುತ್ತಿದ್ದ ಪೊಲೀಸರಿಗೆ ನಿಂದನೆ: ಯುವಕರಿಬ್ಬರ ಬಂಧನ

ಹೊಸದಿಗಂತ ವರದಿ,ಮಂಡ್ಯ:

ವಾಹನ ತಪಾಸಣೆ ನಡೆಸುತ್ತಿದ್ದ ಕರ್ತವ್ಯ ನಿರತ ಪೊಲೀಸರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಕಾರಣ ಯುವಕರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಹೊಸಹಳ್ಳಿ ಬಡಾವಣೆಯ ಸಂಜಯ್ (28) ಹಾಗೂ ಗಾಂಧಿನಗರದ ಮಣಿಕಂಠ (24) ಎಂಬುವರೇ ಬಂಧಿತ ಆರೋಪಿಗಳಾಗಿದ್ದಾರೆ.
ನಗರದ ಹೊಸಹಳ್ಳಿ ಬಡಾವಣೆಯ ಆದರ್ಶ ಶಾಲೆ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಬೈಕ್‌ನಲ್ಲಿ ಬಂದ ಸಂಜಯ್ ಹಾಗೂ ಮಣಿಕಂಠ ಅವರನ್ನು ಪೊಲೀಸರು ತಡೆದು ವಾಹನಗಳ ದಾಖಲಾತಿಗಳನ್ನು ಕೇಳಿದ್ದಾರೆ.
ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಅಲ್ಲದೆ, ಇನ್ಸ್‌ಪೆಕ್ಟರ್ ರಮೇಶ್ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಕಾರಣ ಇಬ್ಬರನ್ನೂ ಬಂಧಿಸಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!