ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಜಪಡೆ (Gajapade) ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯ ಮೂಲಕ ನಿರ್ಮಾಪಕಿ, ಪುನೀತ್ ರಾಜ್ ಕುಮಾರ್ ಮಡದಿ ಅಶ್ವಿನಿ ಅವರ ಕುರಿತು ನಿಂದನೆ ಪೋಸ್ಟ್ ಮಾಡಿರುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಸಿಎಂ ಸಿದ್ಧರಾಮಯ್ಯ ಸೇರಿದಂತೆ ಹಲವರು ಈ ನಡೆಯನ್ನು ಖಂಡಿಸಿದ್ದಾರೆ.
ಇದೀಗ ಬಿಟಿಎಂ ಲೇ ಔಟ್, ಜೆ ಪಿ ನಗರ ಹಾಗೂ ತಲಘಟ್ಟಪುರದ ಪೊಲೀಸ್ ಠಾಣೆಯಲ್ಲಿ ಗಜಪಡೆ ಖಾತೆಯ ವಿರುದ್ಧ ದೂರು (Complaint) ನೀಡಲಾಗಿದೆ.
ಅಶ್ವಿನಿ (Ashwini Puneeth Rajkumar) ಬಗ್ಗೆ ಅವಹೇಳನಕಾರಿ ಪೋಸ್ಟ್ (Post) ಮಾಡಿದವರ ವಿರುದ್ಧ ಕ್ರಮಕ್ಕೆ ದಿನದಿಂದ ದಿನಕ್ಕೆ ಒತ್ತಡ ಹೆಚ್ಚಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈಗಾಗಲೇ ವಿರೋಧಿ ಪೋಸ್ಟ್ ಗಳು ಹರಿದಾಡುತ್ತಿವೆ. ಜೊತೆಗೆ ಸಿನಿಮಾ ರಂಗದ ಅನೇಕರು ಪೋಸ್ಟ್ ವಿರುದ್ಧ ಧ್ವನಿ ಎತ್ತಿದ್ದಾರೆ. ಈಗ ಅಪ್ಪು ಫ್ಯಾನ್ಸ್ ಗೃಹ ಸಚಿವರನ್ನು ಭೇಟಿ ಮಾಡಿ, ಕ್ರಮಕ್ಕಾಗಿ ಒತ್ತಾಯ ಮಾಡಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಕೂಡ ಕಠಿಣ ಕ್ರಮದ ಮಾತುಗಳನ್ನು ಆಡಿದ್ದಾರೆ.