ತಿರುಪತಿ ದೇವಸ್ಥಾನದ ಅಕ್ರಮಗಳ ಕುರಿತು ಎಸಿಬಿ ತನಿಖೆ: ಬಿ.ಆರ್‌.ನಾಯ್ಡು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಿರುಪತಿ ದೇವಸ್ಥಾನದಲ್ಲಿ ಐದು ವರ್ಷಗಳಲ್ಲಿ ನಡೆದ ಎಲ್ಲ ಅಕ್ರಮಗಳ ಕುರಿತಂತೆ ಭ್ರಷ್ಟಾಚಾರ ನಿಗ್ರಹ ದಳದಿಂದ (ಎಸಿಬಿ) ತನಿಖೆ ನಡೆಸಲು ಸೂಚನೆ ನೀಡಬೇಕು ಎಂದು ಟಿಟಿಡಿ ಅಧ್ಯಕ್ಷ ಬಿ.ಆರ್‌.ನಾಯ್ಡು ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ.

ಕೆಲವು ವ್ಯಕ್ತಿಗಳು ದೇವಾಲಯದ ಆಡಳಿತದ ವಿರುದ್ಧ ಮುಖ್ಯವಾಹಿನಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಿಂದಿನ ವೈಎಸ್‌ಆರ್‌ ಸರ್ಕಾರದ ಅವಧಿಯಲ್ಲಿ ಹಸುಗಳಿಗೆ ಸೂಕ್ತ ಮೇವು ಒದಗಿಸಲು ವಿಫಲರಾಗಿದ್ದರು. ಭಕ್ತರು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿದ್ದ ಒಂಗೋಲ್‌ ಹಸುಗಳನ್ನು ಹಿಂದಿನ ಆಡಳಿತ ಮಂಡಳಿಯವರೇ ಮಾರಿದ್ದಾರೆ. ಅವರೇ ಈಗ ಟಿಡಿಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಕಳೆದ ಮೂರು ತಿಂಗಳಲ್ಲಿ ಟಿಟಿಡಿ ಗೋಶಾಲೆಯಲ್ಲಿ 100 ಗೋವುಗಳು ಮೃತಪಟ್ಟಿವೆ ಎಂದು ಟಿಟಿಡಿ ಮಾಜಿ ಅಧ್ಯಕ್ಷ ಬಿ.ಕರುಣಾಕರ ರೆಡ್ಡಿ ಅವರು ಆರೋಪಿಸಿದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!