ಹೊಸದಿಗಂತ ವರದಿ, ಮೈಸೂರು
ಕಾರು-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಸೀಗೂರು ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಷಡಕ್ಷರಿಸ್ವಾಮಿ (35) ಮೃತಪಟ್ಟ ಬೈಕ್ ಸವಾರ. ಪಿರಿಯಾಪಟ್ಟಣ ತಾಲೂಕಿನ ಮೇಲೂರು ಗ್ರಾಮದ ನಿವಾಸಿಯಾಗಿರುವ ಷಡಕ್ಷರಿಸ್ವಾಮಿ ಅಲಿಯಾಸ್ ಮಂಜು, ಕೆಲಸದ ನಿಮಿತ್ತ ಪಿರಿಯಾಪಟ್ಟಣಕ್ಕೆ ತೆರಳಿ ಹಿಂತಿರುಗುತ್ತಿದ್ದರು.
ಈ ವೇಳೆ ಕೇರಳ ಮೂಲದ ಕಾರು ಡಿಕ್ಕಿ ಬೈಕ್ ಗೆ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕೇರಳ ಮೂಲದ 5 ವಿದ್ಯಾರ್ಥಿಗಳಿದ್ದರು. ಇನ್ನು ಅಜಾಗರೂಕತೆ ಹಾಗೂ ವೇಗವಾಗಿ ಬಂದ ಹಿನ್ನೆಲೆ ಅಪಘಾತ ಸಂಭವಿಸಿದೆ ಎಂದು ಆರೋಪಿಸಿ ಮೃತನ ಕುಟುಂಬಸ್ಥರು ಬೆಟ್ಟದಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರು ಚಾಲಕ ಹಾಗೂ ಆತನ ಸ್ನೇಹಿತರನ್ನ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ