ಹೊಸದಿಗಂತ, ಮಳವಳ್ಳಿ:
ಹೆದ್ದಾರಿಯ ರಸ್ತೆ ದಾಟುತ್ತಿದ್ದ ಬೈಕ್ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಕೆಂಪಯ್ಯನದೊಡ್ಡಿ ಗ್ರಾಮದ ಸಿದ್ದಶೆಟ್ಟಿ ರವರ ಪುತ್ರ ಶೇಖರ್ (31) ಮೃತ ವ್ಯಕ್ತಿ.
ಕಾರ್ಯ ನಿಮಿತ್ತ ಹಲಗೂರಿಗೆ ಬಂದಿದ್ದ ಈತ ಸ್ವಗ್ರಾಮಕ್ಕೆ ಹಿಂದುರುಗುತ್ತಿದ್ದಾಗ ಬೈಪಾಸ್ ರಸ್ತೆಯಲ್ಲಿ ಮಳವಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತೀವ್ರ ರಕ್ತ ಸ್ರಾವಗೊಂಡ ಶೇಖರ್ ಸ್ಥಳದಲ್ಲೇ ಮೃತಪಟ್ಟನು. ಬೈಕ್ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.