ಲಾರಿಗಳ ನಡುವೆ ಸರಣಿ ಅಪಘಾತ: ಪಾದಚಾರಿ ಸ್ಥಳದಲ್ಲೇ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮೂರು ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿ, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಬಸ್ ನಿಲ್ದಾಣದ ಬಳಿ ನಡೆದಿದೆ.

ದಶರಥ ಜೋಗಿನ (52) ಮೃತ ದುರ್ದೈವಿ. ರಸ್ತೆಬದಿ ನಿಲ್ಲಿಸಿದ್ದ ಲಾರಿಗೆ ಒಂದರ ಹಿಂದೊಂದರಂತೆ ಮೂರು ಲಾರಿಗಳು ಡಿಕ್ಕಿ ಹೊಡೆದಿವೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ದಶರಥ ಜೋಗಿನ ಮೇಲೆಯೇ ಲಾರಿ ಹರಿದು ಹೋಗಿದೆ. ಬಳಿಕ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಲಾರಿಗಳು ಗದ್ದನಕೇರಿ ಕ್ರಾಸ್ ನಿಂದ ಲೋಕಾಪುರ ಕಡೆಗೆ ತೆರಳುತ್ತಿತ್ತು. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!