ಸಿನಿಮಾದ ಚಿತ್ರೀಕರಣದ ವೇಳೆ ಅವಘಡ: ನಟ ಶ್ರೀಮುರಳಿ ಕಾಲಿಗೆ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ರೋರಿಂಗ್ ಸ್ಟಾರ್ ಶ್ರೀಮುರಳಿ (Sriimurali) ಅವರ ‘ಬಘೀರ’ (Bagheera Film) ಸಿನಿಮಾದ ಚಿತ್ರೀಕರಣದ ವೇಳೆ ಅವಘಡ ಸಂಭವಿಸಿದ್ದು, ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ.

ಈ ಚಿತ್ರದ ಸಾಹಸ ದೃಶ್ಯಗಳನ್ನು ಚಿತ್ರೀಕರಿಸುವಾಗ ಶ್ರೀಮುರಳಿ ಕಾಲಿಗೆ ಪೆಟ್ಟಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮುರಳಿ ಅವರಿಗೆ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಶ್ರೀಮುರಳಿ ಚೇತರಿಕೊಳ್ಳುತ್ತಿದ್ದಾರೆ.

ಹೀಗೆ ಕೆಲವು ತಿಂಗಳುಗಳ ಹಿಂದೆ ‘ಬಘೀರ’ ಸಿನಿಮಾ ಸೆಟ್‌ನಲ್ಲಿಯೇ ಶ್ರೀಮುರಳಿ ಕಾಲಿಗೆ ಪೆಟ್ಟು ಬಿದ್ದಿತ್ತು. ಇದೀಗ 2ನೇ ಬಾರಿ ಕೂಡ ಹೀಗೆ ಆಗಿದೆ.

ಬಘೀರ ಸಿನಿಮಾದಲ್ಲಿ ಶ್ರೀಮುರಳಿ, ರುಕ್ಮಿಣಿ ವಸಂತ್ ಜೋಡಿಯಾಗಿ ನಟಿಸಿದ್ದಾರೆ. ಪ್ರಶಾಂತ್ ನೀಲ್ ಬರೆದ ಕಥೆಗೆ ಡಿ.ಆರ್ ಸೂರಿ ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಸಂಸ್ಥೆ ಚಿತ್ರ ನಿರ್ಮಾಣ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!