ಕೊಡಗಿನ ಸಿದ್ದಾಪುರದಲ್ಲಿ ನಿಷೇಧಾಜ್ಞೆ ಜಾರಿ

ದಿಗಂತ ವರದಿ ಮಡಿಕೇರಿ:

ಬಿಜೆಪಿ ಕಾರ್ಯಕರ್ತರೊಬ್ಬರು ಅಪಘಾತಕ್ಕೆ ಬಲಿಯಾಗಿರುವ ಹಿನ್ನೆಲೆಯಲ್ಲಿ ಸಿದ್ದಾಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಈ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಂಡ ಪ್ರಕ್ರಿಯಾ ಸಂಹಿತ 1973ರ ಕಲಂ 144 ರಡಿ ಕೊಡಗು ಜಿಲ್ಲೆಯ ಸಿದ್ದಾಪುರ ನಗರ, ವಾಲ್ನೂರು ಗ್ರಾಮ, ಅರೆಕಾಡು ಗ್ರಾಮ, ನೆಲ್ಲಿಹುದಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮುಂಜಾಗ್ರಾ ಕ್ರಮವಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಶುಕ್ರವಾರ ರಾತ್ರಿ 10 ಗಂಟೆಯವರೆಗೆ ನಿಷೇಧಾಜ್ಞೆ ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.

ಈ ಅವಧಿಯಲ್ಲಿ 5 ಕ್ಕಿಂತ ಹೆಚ್ಚು ಜನ ಗುಂಪು ಸೇರುವುದು, ಪ್ರತಿಭಟನೆ, ಮೆರವಣಿಗೆ, ರ್‍ಯಾಲಿ, ಜಾಥಾ, ರಸ್ತೆ ತಡೆ, ಪ್ರಚೋದಾನಾತ್ಮಕ ಹೇಳಿಕೆ, ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!