ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ: ಕಾರು ಡಿಕ್ಕಿ ಹೊಡೆದು ಯುವತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
 
ರಾಷ್ಟ್ರೀಯ ಹೆದ್ದಾರಿ 75 ರ ಬಂಟ್ವಾಳದ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.

ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ( 23) ಮೃತಪಟ್ಟ ದುರ್ದೈವಿಯಾಗಿದ್ದಾಳೆ.

ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ ಈಕೆ ಸಂಜೆ ಕೆಲಸ ಮುಗಿಸಿ ಬಿ.ಸಿ.ರೋಡಿನಿಂದ ಬಂದು ದಾಸಕೋಡಿಯಲ್ಲಿ ಬಸ್ ಇಳಿದು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅತೀವೇಗ ಹಾಗೂ ಅಜಾಗರುಕತೆಯಿಂದ ಧಾವಿಸಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.

ಪರಿಣಾಮ ಯುವತಿ ರಸ್ತೆ ಬದಿಯ ತೋಡಿಗೆ ಎಸೆಯಲ್ಪಟ್ಟಿದ್ದರೆ,ಕಾರು ಕೂಡ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.ಘಟನೆಯಿಂದಾಗಿ‌ ಯುವತಿ ಗಂಭೀರಗಾಯಗೊಂಡಿದ್ದು,ತಕ್ಷಣ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ಸಾಗಿಸಿದಾದರೂ ದಾರಿಮಧ್ಯೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!