ಹೊಸದಿಗಂತ ವರದಿ, ಕುಶಾಲನಗರ:
ಬೈಕ್ ಮತ್ತು ಸ್ಕೂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ ಘಟನೆ ಇಲ್ಲಿಗೆ ಸಮೀಪದ ಕಣಿವೆಯಲ್ಲಿ ನಡೆದಿದೆ.
ಮೃತರನ್ನು ಕಣಿವೆ ನಿವಾಸಿ ಕೃಷ್ಣಮೂರ್ತಿ (48) ಎಂದು ಗುರುತಿಸಲಾಗಿದೆ.
ಕಣಿವೆಯಿಂದ ಕುಶಾಲನಗರಕ್ಕೆ ಬರುತ್ತಿದ್ದ ಕೃಷ್ಣಮೂರ್ತಿ ಅವರು ಚಾಲಿಸುತ್ತಿದ್ದ ಸ್ಕೂಟರ್’ಗೆ ಕುಶಾಲನಗರ-ಹಾಸನ ಹೆದ್ದಾರಿಯ ಕಣಿವೆಯಲ್ಲಿ ಬೈಕ್ ಡಿಕ್ಕಿಯಾಗಿದೆ. ಈ ಸಂದರ್ಭ ಗಂಭೀರವಾಗಿ ಗಾಯಗೊಂಡ ಕೃಷ್ಣಮೂರ್ತಿ ಅವರಿಗೆ ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ಕರೆದೊಯ್ಯುವ ಸಂದರ್ಭ ದಾರಿ ಮಧ್ಯೆ ಅಸುನೀಗಿದ್ದಾರೆ.
ಕೃಷ್ಣಮೂರ್ತಿ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು, ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.