ಶಬರಿಮಲೆಯಿಂದ ಮರಳಿ ಬರುವಾಗ ಅಪಘಾತ: ರಾಜ್ಯದ 23 ಭಕ್ತರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಭಕ್ತರ ಬಸ್​ಗೆ ಲಾರಿ​​ ಡಿಕ್ಕಿ ಹೊಡೆದ ಪರಿಣಾಮ 23 ಭಕ್ತರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಕೇರಳದ ಕಣ್ಣೂರಿನ ಪೊನ್ನೂರು ಬಳಿ ನಡೆದಿದೆ.

ಶಬರಿಮಲೆಯಿಂದ ರಾಮನಗರ ತಾಲೂಕಿನ ಪೇಟೆಕುರುಬರಹಳ್ಳಿಯ ಭಕ್ತರು ಹಿಂದಿರುಗುತ್ತಿದ್ದರು. ಈ ವೇಳೆ ಇ ಲಾರಿಗೆ ಮಿನಿ ಬಸ್​ ಡಿಕ್ಕಿ ಹೊಡೆದಿದೆ. ಗಾಯಾಳು ಭಕ್ತರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಮಿನಿ ಬಸ್​ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ನವೆಂಬರ್ 20 ರ ರಾತ್ರಿ ಶಬರಿಮಲೆ ದರುಶನಕ್ಕೆಂದು ಮಾಲೆ ಧರಿಸಿ ತೆರಳಿದ್ದರು. ಶಬರಿಮಲೆ ದರ್ಶನ ಮುಗಿಸಿಕೊಂಡು ಧರ್ಮಸ್ಥಳಕ್ಕೆ ಬರುವಾಗ ಅವಘಡ ಸಂಭವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!