ಅಪಘಾತ ವಲಯ, ನಿಧಾನವಾಗಿ ಚಲಿಸಿ: ಶಬರಿಮಲೆ ಯಾತ್ರಿಗಳಿಗೆ ಇಲಾಖೆಯ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪವಿತ್ರ ಶಬರಿಮಲೆಗೆ ತೆರಳುವ ಯಾತ್ರಿಗಳಿಗೆ ಕೊಟ್ಟಾರಕ್ಕರ ದಿಂಡುಕ್ಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಗುವ 27 ಅಪಘಾತ ಅಪಾಯವಿರುವ ಸ್ಥಳಗಳ ಬಗ್ಗೆ ಎಚ್ಚರವಹಿಸುವಂತೆ ಕೇರಳ ಸಾರಿಗೆ ಇಲಾಖೆ ಸೂಚಿಸಿದೆ.

ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಮಳೆಯ ಹಿನ್ನೆಲೆಯಲ್ಲಿ ಈ ಭಾಗದ ರಸ್ತೆಗಳಿಗೆ ಅಪಾರ ಹಾನಿಯಾಗಿದ್ದು, ಈ ಭಾಗಗಳಲ್ಲಿ ಟಾರ್ ಬ್ಯಾರೆಲ್, ರಿಬ್ಬನ್‌ಗಳನ್ನು ಬಳಸಿ ಅಪಾಯದ ಸಾಧ್ಯತೆ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಮಳೆಯಿಂದಾಗಿ ಉಂಟಾಗಿರುವ ಭೂಕುಸಿತದಿಂದ ಕುಟ್ಟಿಕಾನಂ ಮತ್ತು 35 ನೇ ಮೈಲಿ ನಡುವೆ ಏಳು ಸ್ಥಳಗಳಲ್ಲಿ ತಡೆಗೋಡೆ ಕುಸಿದಿದೆ. ಇಲ್ಲಿ ರಸ್ತೆಗೆ ಬಿದ್ದಿರುವ ಮಣ್ಣು, ಕಲ್ಲುಗಳನ್ನು ಇನ್ನೂ ತೆರವು ಮಾಡಲಾಗಿಲ್ಲ. ಅಲ್ಲದೆ ಈ ಭಾಗದಲ್ಲಿ ಕಡಿದಾದ ತಿರುವುಗಳಿದ್ದು, ಕೆಲವು ಕಡೆಗಳಲ್ಲಿ ಸುರಕ್ಷತಾ ಎಚ್ಚರಿಕೆ ಫಲಕಗಳು ಕೂಡಾ ಪೊದೆಗಳಿಂದ ಆವೃತ್ತವಾಗಿದೆ. ಹೀಗಾಗಿ ಯಾತ್ರಿಗಳು ಈ ದಾರಿಯಲ್ಲಿ ತೆರಳುವಾಗ ಸಾಕಷ್ಟು ಎಚ್ಚರಿಕೆ ವಹಿಸುವ ಅಗತ್ಯವಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!