ಗೋದಾಮುವೊಂದಕ್ಕೆ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಕೊಬ್ಬರಿ ಬೆಂಕಿಗಾಹುತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಿತ್ರದುರ್ಗದಲ್ಲಿ ಕೊಬ್ಬರಿ ಗೋದಾಮಿಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದೆ.

ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಕೊಬ್ಬರಿ ಗೋದಾಮು ಚಿಕ್ಕಬ್ಯಾಲದಕೆರೆ ಸಮೀಪದ ಜಮೀನಿನಲ್ಲಿ ಅಂಗಡಿ ವ್ಯಾಪಾರಿ ಜಗದೀಶ್ ಅವರಿಗೆ ಸೇರಿದ್ದು, ಗ್ರಾಮದ ಹೊರವಲಯದಲ್ಲಿದೆ.

ಇದೀಗ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ನಂದಿಸಿದ್ದಾರೆ. ಸ್ಥಳಕ್ಕೆ ಶ್ರೀರಾಂಪುರ ಠಾಣೆ ಪಿಐ ಮಧು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!