ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಅವಘಡದಲ್ಲಿ 6 ಹಸು, 2 ಕರುಗಳು ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿಬಿದ್ದು 6 ಹಸುಗಳು ಹಾಗೂ 2 ಕರುಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಗ್ರಾಮದ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಘಟನೆ ನಡೆದಿದೆ.

ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು ೬ ಹಸು, ೨ ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!