ಹೊಸದಿಗಂತ ವರದಿ ವಿಜಯಪುರ:
ಮಾರಾಟ ಮಾಡಲು ಇಟ್ಟುಕೊಂಡಿದ್ದ 2 ಕಂಟ್ರಿ ಪಿಸ್ತೂಲ್, 4 ಜೀವಂತ ಗುಂಡು ಜಪ್ತಿ ಮಾಡಿ, ಪೊಲೀಸರು ಆರೋಪಿಯನ್ನು ಬಂಧಿಸಿರುವ ಘಟನೆ ನಗರದ ಇಂಡಿ ಬೈಪಾಸ್ ಬಳಿ ನಡೆದಿದೆ.
ಬಂಧಿತ ಆರೋಪಿಯನ್ನು ಗ್ಯಾಂಗ್ ಬಾವಡಿ ಕುಂಬಾರ ಗಲ್ಲಿಯ ಉಮೇರ್ ಬಂದೇನವಾಜ್ ಗಿರಿಗಾಂವ (23) ಎಂದು ಗುರುತಿಸಲಾಗಿದೆ. ಆರೋಪಿ ಅನಧೀಕೃತವಾಗಿ ಕಂಟ್ರಿ ಪಿಸ್ತೂಲ್ ಖರೀದಿಸಿ, ಮಾರಾಟ ಮಾಡಲು ಇಟ್ಟುಕೊಂಡ ಖಚಿತ ಮಾಹಿತಿ ಆಧರಿಸಿ, ಪೊಲೀಸರು ದಾಳಿ ನಡೆಸಿದ್ದಾರೆ.
ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ ಪಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಡಿವೈಎಸ್ ಪಿ ಬಸವರಾಜ ಯಲಿಗಾರ ಮಾರ್ಗದರ್ಶನದಲ್ಲಿ ಸಿಪಿಐ ಮಲ್ಲಯ್ಯ ಮಠಪತಿ, ಪಿಎಸ್ ಐ ಜ್ಯೋತಿ ಖೋತ ಹಾಗೂ ಸಿಬ್ಬಂದಿ ತಂಡ ಆರೋಪಿಯನ್ನು ಬಂಧಿಸಿದೆ.
ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.