ಹೊಸದಿಗಂತ ವರದಿ, ಮಡಿಕೇರಿ:
ನಿಷೇಧಿತ ಮಾದಕ ವಸ್ತುಗಳ ಸರಬರಾಜು/ಮಾರಾಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬನನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ನಾಪೋಕ್ಲು ಸಮೀಪದ ಕೊಟ್ಟಮುಡಿ ನಿವಾಸಿ ರಿಜ್ವಾನ್.ಎಂ.ಎ (26) ಎಂಬಾತನೇ ಬಂಧಿತ ಆರೋಪಿ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ವಸ್ತುಗಳ ಸರಬರಾಜು/ಮಾರಾಟ/ಬಳಕೆ ಬಗ್ಗೆ ಸಾರ್ವಜನಿಕರಿಂದ ಬರುತ್ತಿದ್ದ ದೂರಿನ ಅನ್ವಯ ಮಡಿಕೇರಿ ಡಿವೈಎಸ್ಪಿ ಜಗದೀಶ್.ಎಂ, ವೃತ್ತ ನಿರೀಕ್ಷಕ ಉಮೇಶ್.ಯು, ಮಡಿಕೇರಿ ಗ್ರಾಮಾಂತರ ಠಾಣೆ ಪಿಎಸ್ ಐ ವಾಣಿಶ್ರೀ ಹಾಗೂ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿತ್ತು.
ಈ ತಂಡ ಮಾಹಿತಿ ಸಂಗ್ರಹಿಸಿ ನಿಷೇಧಿತ ಮಾದಕ ವಸ್ತುಗಳ ಸರಬರಾಜು/ಮಾರಾಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಜ್ವಾನ್.ಎಂ.ಎ.ನನ್ನು ಬೆಂಗಳೂರಿನ ದಾಸರಹಳ್ಳಿಯಲ್ಲಿ ಬಂಧಿಸಿದೆ.