ಮಹಿಳೆಯರ ಮೇಲೆ ಆ್ಯಸಿಡ್ ದಾಳಿ – ಶಿಕ್ಷೆ ಮತ್ತಷ್ಟು ಕಠಿಣಗೊಳಿಸಲು ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್
ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಮಾಡುವವರಿಗೆ ಇನ್ನಷ್ಟು ಕಠಿಣ ಶಿಕ್ಷೆ ಒದಗಿಸುವ ಕಾನೂನು ಜಾರಿಗೊಳಿಸುವಂತೆ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಗೀತಾ ವಿವೇಕಾನಂದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.
ಆ್ಯಸಿಡ್ ದಾಳಿ ಮಾಡಿದವರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿ ಕೂಡಲೇ ಬಂಧಿಸಬೇಕು. ಅಪರಾಧಿಗೆ ಕನಿಷ್ಠ 10 ವರ್ಷ ಕಠಿಣ ಶಿಕ್ಷೆ ವಿಧಿಸಬೇಕು. ಆ್ಯಸಿಡ್ ದಾಳಿ ಸಂಬಂಧ ವಿಚಾರಣೆಗೆ ತ್ವರಿತ ನ್ಯಾಯ ನೀಡುವ ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗಳನ್ನು ಸ್ಥಾಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಆ್ಯಸಿಡ್ ಸಂತ್ರಸ್ತರಿಗೆ ನೆರವಾಗಲು “ಆಸರೆ” ನೀಡುವ ದೃಷ್ಟಿಯಿಂದ ಮಾಸಾಶನವನ್ನು 3 ಸಾವಿರದಿಂದ 10 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ. ಪ್ರತಿಯೊಬ್ಬ ಆ್ಯಸಿಡ್ ಸಂತ್ರಸ್ತ ಮಹಿಳೆಗೆ ಸರಕಾರವು ಉಚಿತ ನಿವೇಶನ ನೀಡಿ ಮನೆ ನಿರ್ಮಿಸಿ ಕೊಡಲು ಮುಂದಾಗಿರುವುದು ಅತ್ಯಂತ ಪ್ರಮುಖ ನಿರ್ಧಾರ ಎಂದು ಅವರು ಸ್ವಾಗತಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯದ ಸಚಿವಸಂಪುಟಕ್ಕೆ ಅವರು ಧನ್ಯವಾದ ಸಮರ್ಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!