ನೆರೆಮನೆಯ ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೆರೆಮನೆಯ ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್‌ಆರ್ ಪುರ ತಾಲೂಕಿನ ಕರಗುಂದ ಗ್ರಾಮದಲ್ಲಿ ನಡೆದಿದೆ.

ಜೇಮ್ಸ್ ಆಸಿಡ್ ದಾಳಿ ಮಾಡಿದ ಆರೋಪಿ, ಸುಂದರ್ ರಾಜ್ ಆಸಿಡ್ ದಾಳಿಗೊಳಗಾದ ವ್ಯಕ್ತಿ.

ಜೇಮ್ಸ್ ಹಾಗೂ ಸುಂದರ್ ರಾಜ್ ನೆರೆಹೊರೆಯವರು. ಹಲವು ದಿನಗಳಿಂದ ಇಬ್ಬರ ನಡುವೆ ಗಲಾಟೆಯಾಗಿ, ಮನಸ್ಥಾಪವಿತ್ತು. ನಿನ್ನೆ ಸುಂದರ್ ರಾಜ್ ಮನೆಯ ಸಾಕು ನಾಯಿ ಬೊಗಳುತ್ತಿತ್ತು. ಈ ವೇಳೆ ಮನೆ ಮಾಲೀಕ ಸುಂದರ್ ರಾಜ್ ನಾಯಿಗೆ ಬೈದಿದ್ದಾರೆ. ಆಗ ಜೇಮ್ಸ್ ನಾಯಿಗೆ ಬೈದಂತೆ ನನಗೆ ಬೈಯುತ್ತಿದ್ದಾನೆ ಎಂದು ಜಗಳವಾಡಿದ್ದಾನೆ. ಇಬ್ಬರು ಜಗಳವಾಡುವಾಗ ಜೇಮ್ಸ್ ಏಕಾಏಕಿ ಸುಂದರ್ ರಾಜ್ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ.

ಆಸಿಡ್ ದಾಳಿಗೆ ಸುಂದರ್ ರಾಜ್ ಮುಖ ಬಹುತೇಕ ಸುಟ್ಟು ಹೋಗಿದೆ. ಕೂಡಲೇ ಅವರನ್ನು ಎನ್‌ಆರ್ ಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆಸಿಡ್ ದಾಳಿ ಬಳಿಕ ಜೇಮ್ಸ್ ದಂಪತಿ ನಾಪತ್ತೆಯಾಗಿದ್ದಾರೆ. ಎನ್‌ಆರ್ ಪುರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!