ಉಚಿತ ಟ್ಯಾಂಕರ್ ನೀರನ್ನು ಕಲ್ಪಿಸುವ​ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಆಕ್ಷನ್​ ಪ್ರಿನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿನೇ ದಿನೇ ಬಿಸಿಲಿನ ಪ್ರಭಾವ ಹೆಚ್ಚುತ್ತಿದೆ. ಮತ್ತೊಂದೆಡೆ ನೀರಿನ ಕೊರತೆ ಶುರುವಾಗಿದೆ. ಅದರಲ್ಲೂ ಬೆಂಗಳೂರಿನ ನಿವಾಸಿಗಳು ಕುಡಿಯುವ ನೀರಿಗೆ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಿರುವಾಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಿಜ ಜೀವನದಲ್ಲೂ ಜನರಿಗೆ ಸಹಾಯ ಮಾಡುವ ಮೂಲಕ ಹೀರೋ ಆಗಿದ್ದಾರೆ.

ಬೆಂಗಳೂರು ಕಳೆದ ಎರಡು ತಿಂಗಳಿಂದ ನೀರಿನ ಕೊರತೆಯಿಂದ ಬಳಲುತ್ತಿದೆ. ಹೀಗಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ನೀರಿನ ಸಮಸ್ಯೆ ಉಲ್ಬಣಗೊಳ್ಳುತ್ತಿದ್ದಂತೆ ನಟ ಧ್ರುವ ಸರ್ಜಾ ಕೆಂಗೇರಿ ಸುತ್ತಮುತ್ತಲಿನ ಮನೆಗಳಿಗೆ ಉಚಿತವಾಗಿ ಟ್ಯಾಂಕ್‌ಗಳಿಂದ ನೀರು ಒದಗಿಸಿದ್ದಾರೆ.

ಅಖಿಲ ಕರ್ನಾಟಕ ಧ್ರುವ ಸರ್ಜಾ ಅಭಿಮಾನಿಗಳ ಸಂಘದಿಂದ ನೀರಿನ ಕೊರತೆಯಿಂದ ಬಳಲುತ್ತಿರುವ ಜನರಿಗೆ ನೀರು ಒದಗಿಸಿವು ಮೂಲಕ ಮೆಚ್ಚುಗೆಯ ಕಾರ್ಯ ಮಾಡಿದೆ. ನಟನ ಈ ಕಾರ್ಯ ಜನರು ಮೆಚ್ಚಿ, ನಟನ ಉತ್ತಮ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!